ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಿರಿಜಾ ದೇವಿ ಅವರು ನಿನ್ನೆ ಮಧ್ಯಾಹ್ನದ ಸುಮಾರಿನಲ್ಲಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೀಗಾಗಿ ನಿನ್ನೆ ಮಧ್ಯಾಹ್ನವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ‘ಠುಮ್ರಿ’ಯ ರಾಣಿ ಎಂದೇ ಖ್ಯಾತರಾಗಿದ್ದ ಗಿರಿಜಾದೇವಿ ಅವರು ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳನ್ನು ಪಡೆದಿದ್ದರು.