ಇಂದಿನ ಭೇಟಿ ಸಂದರ್ಭದಲ್ಲಿ ಸಿಎಂ ಯೋದಿ ಆದಿತ್ಯನಾಥ್ ಅವರು ತಾಜ್ ಮಹಲ್ ನ ಒಳಗೆ ಪ್ರವೇಶ ಮಾಡಲಿದ್ದು, ತಾಜ್ ಮಹಲ್ ನ ವಿವಿಧ ಮೂಲೆಗಳನ್ನು ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೆ ಶಹಜಹಾನ್ ಸಮಾಧಿ, ಮುಮ್ತಾಜ್ ಮಹಲ್, ಶಹಜಹಾನ್ ಪಾರ್ಕ್ ಗೂ ಯೋಗಿ ಭೇಟಿ ನೀಡಲಿದ್ದಾರೆ.ಕೇವಲ ಭೇಟಿ ಮಾತ್ರವಲ್ಲದೇ ಐತಿಹಾಸಿಕ ಕಟ್ಟದ ಒಳ ಹಾಗೂ ಹೊರಗಿನ ಪ್ರದೇಶಗಳನ್ನು ಕೂಲಂಕುಷವಾಗಿ ಪರಿಶೀಲಿಸಲಿದ್ದಾರೆ. ಅಂತೆಯೇ ಆಗ್ರಾ ಕೋಟೆಯಿಂದ ನೇರವಾಗಿ ತಾಜ್ ಮಹಲ್ ಗೆ ಪ್ರವಾಸಿಗರು ತೆರಳಲು ಅನುಕೂಲವಾಗುವಂತೆ ಸರ್ಕಾರ ನಿರ್ಮಿಸುತ್ತಿರುವ ಕಾಮಗಾರಿಗೆ ಶಂಕುಸ್ಥಾಪನೆ ಕೂಡ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 500ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳುವ ಸಾಧ್ಯತೆ ಇದೆ.