ಇದೇ ಸೋಮವಾರ ವಿವಿಧ ನಾಯಕರಿಂದ ಬಂದ ಟೀಕೆಗಳನ್ನು ಕಡೆಗಣಿಸಿ, ವಸುಂಧರಾ ರಾಜೇ ನೇತೃತ್ವದ ಭಾರತೀಯ ಜನತಾ ಪಾರ್ಟಿ ಸರ್ಕಾರವು ರಾಜಸ್ಥಾನ ವಿಧಾನಸಭೆಯಲ್ಲಿ ವಿವಾದಾತ್ಮಕ ಮಸೂದೆಯನ್ನು ಮಂಡಿಸಿತ್ತು. ಈ ಮಸೂದೆಯು ಸರ್ಕಾರದ ಹಾಲಿ ಮತ್ತು ಮಾಜಿ ನ್ಯಾಯಾಧೀಶರು, ಸಾರ್ವಜನಿಕ ಸೇವೆಯಲ್ಲಿರುವವರನ್ನು ರಕ್ಷಿಸಲು ಯತ್ನಿಸುತ್ತಿದೆ. ಎನ್ನುವ ಆರೋಪವಿತ್ತು. ಜತೆಗೆ ತನಿಖೆ ನಡೆಸಲು ಸರ್ಕಾರ ಅನುಮತಿ ನೀಡುವವರೆಗೂ ಮಾಧ್ಯಮಗಳು ಇಂತಹ ಆರೋಪಗಳನ್ನು ವರದಿ ಮಾಡುವಂತಿಲ್ಲ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿತ್ತು.