ಕೇಂದ್ರೀಯ ಪಡೆಯ 10 ತುಕಡಿಗಳನ್ನು ಅಕ್ಟೋಬರ್ 16ರಿಂದ ಹಿಂಪಡೆಯುತ್ತಿರುವುದಾಗಿ ಹಾಗೂ ಉಳಿದ ಐದು ತುಕಡಿಗಳನ್ನು ಅಕ್ಟೋಬರ್ 20ರ ನಂತರ ಹಿಂಪಡೆಯುವುದಾಗಿ ಕಳೆದ ಭಾನುವಾರ ಕೇಂದ್ರ ಗೃಹ ಸಚಿವಾಲಯ ತಿಳಿಸಿತ್ತು. ಆದರೆ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ತೀವ್ರ ಅಸಮಾಧಾನಗೊಂಡ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ಅಲ್ಲದೆ ಡಾರ್ಜಿಲಿಂಗ್ ನಿಂದ ಕೇಂದ್ರೀಯ ಪಡೆಗಳನ್ನು ಹಿಂಪಡೆಯುತ್ತಿರುವುದು ರಾಜಕೀಯವಾಗಿ ಮತ್ತು ಆಡಳಿತಾತ್ಮಕವಾಗಿಯೂ ಕೆಟ್ಟ ನಿರ್ಧಾರ ಎಂದಿದ್ದರು.