ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ವಡಕ್ಕನ್ ಅವರು, ಗುರೂಜಿಯವರು ಈ ರೀತಿಯ ನಿರ್ಧಾರ ತೆಗೆದುಕೊಂಡಿರುವುದನ್ನು ಮೆಚ್ಚಲೇಬೇಕು. ಅಯೋಧ್ಯೆ ವಿವಾದ ನ್ಯಾಯಾಲಯದ ಅಂಗಳದಲ್ಲಿದೆ. ವಿವಾದನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಿಕೊಳ್ಳಬಹುದಾದರೆ, ಸಮಸ್ಯೆಯನ್ನು ಬಗೆಹರಿಸಲು ರವಿಶಂಕರ್ ಗುರೂಜಿಯವರು ಪ್ರಯತ್ನಿಸಿದೆರ, ಅದು ಸ್ವಾಗತಾರ್ಹ ಯಾರ ಮೇಲೂ ಯಾವುದೇ ಒತ್ತಡ ಹೇರದಂತೆ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ಹೇಳಿದ್ದಾರೆ.