ಪ್ರಧಾನಿ ಮೋದಿ ಜಿಎಸ್ ಟಿ ಮತ್ತು ಬುಲೆಟ್ ರೈಲು ಯೋಜನೆಯನ್ನೂ ಆತುರದಿಂದ ಜಾರಿಗೊಳಿಸಿದ್ದಾರೆ ಎಂದು ಆರೋಪಿಸಿದ ಚಿದಂಬರಂ ಅವರು, ಒಂದು ವೇಳೆ ನನ್ನ ಪ್ರಧಾನಿ ನೋಟ್ ನಿಷೇಧದಂತಹ ಕಠಿಣ ಕ್ರಮವನ್ನು ಜಾರಿಗೊಳಿಸುವಂತೆ ನನಗೆ ಸೂಚಿಸಿದ್ದರೆ ನಾನು ಅದನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಒಂದು ಜಾರಿಗೊಳಿಸಲೇಬೇಕು ಎಂದು ಒತ್ತಡ ಹೇರಿದ್ದರೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೆ ಎಂದು ವರದಿಗಾರರಿಗೆ ತಿಳಿಸಿದ್ದಾರೆ.