ಹೈದರಾಬಾದ್ ಕರ್ನಾಟಕ ಭಾಗದ ಮಹತ್ವಕಾಂಕ್ಷಿ ಯೋಜನೆಯಾಗಿರುವ ಬೀದರ್-ಕಲಬುರಗಿ ರೈಲು ಮಾರ್ಗ ನರೇಂದ್ರಮೋದಿಯವರು ಲೋಕಾರ್ಪಣೆ ಮಾಡುತ್ತಿದ್ದು,ಬೀದರ- ಕಲಬುರಗಿ ರೈಲು ಮಾರ್ಗ ಉತ್ತರ ಮತ್ತು ದಕ್ಷಿಣ ಭಾರತವನ್ನು ಬೆಸೆಯಲಿರುವ ಹಿನ್ನೆಯಲ್ಲಿ ಹೆಚ್ಚು ಮಹತ್ವ ಪಡೆದಿದೆ. ಈ ರೈಲು ಮಾರ್ಗದಿಂದ ದಕ್ಷಿಣ ಮತ್ತು ಉತ್ತರ ಭಾರತದ ನಡುವಿನ 350ಕ್ಕೂ ಹೆಚ್ಚು ಕಿ.ಮೀ. ಅಂತರ (4 ಗಂಟೆ ಸಮಯ ಕಡಿಮೆ) ತಗ್ಗಬಹುದೆಂದು ಅಂದಾಜಿಸಲಾಗಿದೆ. ದಕ್ಷಿಣ ಭಾರತದ ರಾಜ್ಯಗಳ ರಾಜಧಾನಿಗಳಾದ ಬೆಂಗಳೂರು, ಚೆನ್ನೈ ಮತ್ತು ರಾಷ್ಟ್ರದ ರಾಜಧಾನಿ ನವದೆಹಲಿಯ ನಡುವಿನ ಅಂತರವನ್ನು ಕಡಿಮೆ ಮಾಡಿದಂತಾಗಿದೆ. ಅಷ್ಟೇ ಅಲ್ಲ ಈ ಹೊಸ ಮಾರ್ಗದಿಂದ ಬೀದರ್ ನಿಂದ ಮಹಾರಾಷ್ಟ್ರದ ಮುಂಬೈಗೆ ಸಹ 115 ಕಿ.ಮೀ. ನಷ್ಟು ಪ್ರಯಾಣ ಹಾಗೂ ಬೀದರ್-ಬೆಂಗಳೂರು ಪ್ರಯಾಣ ಸಹ 52 ಕಿ.ಮೀ. ತಗ್ಗುವ ಮೂಲಕ ಪ್ರಯಾಣಿಕರಿಗೆ ಅನುಕೂಲವಾಗಲಿದೆ.