ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾದ ನಂತರ ಸಂಪೂರ್ಣ ಕೇಸರಿಮಯವಾಗುತ್ತಿದೆ ಎಂದು ಹೇಳಬಹುದು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಚೇರಿಗೆ ಕೇಸರಿ ಬಣ್ಣದ ಸ್ಪರ್ಶ ನೀಡಿರುವುದು ಪ್ರತಿಪಕ್ಷದವರ ಕಣ್ಣು ಕೆಂಪು ಮಾಡಿದೆ. ಸರ್ಕಾರದ ಈ ನಡೆಯನ್ನು ವಿರೋಧಿಸಿರುವ ಪ್ರತಿಪಕ್ಷ, ಆದಿತ್ಯನಾಥ್ ಅವರು ಉತ್ತರ ಪ್ರದೇಶ ರಾಜಕೀಯವನ್ನು ಕೇಸರೀಕರಣಗೊಳಿಸಲು ಹೊರಟಿದ್ದಾರೆ ಎಂದು ಆರೋಪಿಸಿವೆ.