ಸಿಬಿಐ ಕೇವಲ ತನಿಖಾ ದಳವಾಗಿದ್ದು, ಸುಪ್ರೀಂಕೋರ್ಟ್ ನಿರ್ದೇಶನದಂತೆ ಅದು ತನ್ನ ಕೆಲಸವನ್ನು ಮಾಡಬೇಕು. ಮುಖ್ಯಮಂತ್ರಿಗಳಿಗೆ ಕ್ಲೀನ್ ಚಿಟ್ ನೀಡಲು ಸಿಬಿಐ ಏನೂ ಅಲ್ಲ. ಈ ಬಗ್ಗೆ ವಿಚಾರಧೀನ ನ್ಯಾಯಾಲಯ ನಿರ್ಧಾರ ಕೈಗೊಳ್ಳಲಿದೆ. ವ್ಯಾಪಂ ಹಗರಣ ತಮಗೆ ದೊಡ್ಡ ಹೊಡೆತ ಎಂದು ಸ್ವತಃ ಮುಖ್ಯಮಂತ್ರಿ ಚೌಹಾಣ್ ಅವರೇ ಒಪ್ಪಿಕೊಂಡಿದ್ದಾರೆ. ರಾಜಕೀಯ ಒತ್ತಡಗಳಿಂದಾಗಿ ಸಿಬಿಐ ಸುಪ್ರೀಂಕೋರ್ಟ್ ಗೆ ತಪ್ಪು ವರದಿಯನ್ನು ಸಲ್ಲಿಸಿ ತಪ್ಪು ಹಾದಿಗೆಳೆಯುತ್ತಿದೆ. ಸುಪ್ರೀಂಕೋರ್ಟ್ ಸಿಬಿಐ ಆಗೌರವ ತೋರುತ್ತಿದೆ ಎಂದು ತಿಳಿಸಿದ್ದಾರೆ.