ಪೊಲೀಸ್ ವಾಹನದ ಮೇಲೆ ಉಗ್ರರ ದಾಳಿ; ಓರ್ವ ಉಗ್ರನನ್ನು ಸದೆ ಬಡಿದ ಭದ್ರತಾ ಪಡೆಗಳು!

ಕಣಿವೆ ರಾಜ್ಯ ಜಮ್ಮು ಮತ್ತ ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಭದ್ರತಾ ಪಡೆಗಳ ವಾಹನಗಳ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭದ್ರತಾ ಪಡೆಗಳ ಮೇಲೆ ಉಗ್ರ ದಾಳಿ
ಭದ್ರತಾ ಪಡೆಗಳ ಮೇಲೆ ಉಗ್ರ ದಾಳಿ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತ ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಭದ್ರತಾ ಪಡೆಗಳ ವಾಹನಗಳ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಮ್ಮ ಮತ್ತು ಕಾಶ್ಮೀರ ಶ್ರೀನಗರ ಮತ್ತು ಜಮ್ಮು ಹೆದ್ದಾರಿಯ ಪಂತ್ ಚೌಕ್ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆಸುತ್ತಿರುವ ಉಗ್ರರಿಗೆ ಭದ್ರತಾ ಪಡೆ ಸಿಬ್ಬಂದಿ ಅವರದೇ ಧಾಟಿಯಲ್ಲಿ ತಿರುಗೇಟು ನೀಡುತ್ತಿದ್ದಾರೆ. ಇನ್ನು ಭದ್ರತಾ ಪಡೆಗಳ ಗುಂಡಿಗೆ ಓರ್ವ ಉಗ್ರ ಹತನಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಅಂತೆಯೇ ಗಾಯಾಳು ಸಿಬ್ಬಂದಿಗಳಿಗೆ ಸೈನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸೇನಾ ಮೂಲಗಳ ಪ್ರಕಾರ ಸುಮಾರು 20ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊತ್ತಿದ್ದ ವಾಹನ ಬೆಮಿನ್ ಕ್ಯಾಂಪ್ ನಿಂದ ಝೆವಾನ್ ಕ್ಯಾಂಪ್ ಗೆ ತೆರಳುತ್ತಿತ್ತು. ಈ ವೇಳೆ ಜಮ್ಮು-ಶ್ರೀನಗರ ಹೆದ್ದಾರಿಯ ಪಂತ್ ಚೌಕ್ ನಲ್ಲಿ ಅಡಗಿ ಕುಳಿತಿದ್ದ ಉಗ್ರರು ದಾಳಿ ನಡೆಸಿದ್ದಾರೆ. ಪ್ರಸ್ತುತ ಘಟನಾ ಪ್ರದೇಶದಲ್ಲಿ ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com