ಜಮ್ಮ ಮತ್ತು ಕಾಶ್ಮೀರ ಶ್ರೀನಗರ ಮತ್ತು ಜಮ್ಮು ಹೆದ್ದಾರಿಯ ಪಂತ್ ಚೌಕ್ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆಸುತ್ತಿರುವ ಉಗ್ರರಿಗೆ ಭದ್ರತಾ ಪಡೆ ಸಿಬ್ಬಂದಿ ಅವರದೇ ಧಾಟಿಯಲ್ಲಿ ತಿರುಗೇಟು ನೀಡುತ್ತಿದ್ದಾರೆ. ಇನ್ನು ಭದ್ರತಾ ಪಡೆಗಳ ಗುಂಡಿಗೆ ಓರ್ವ ಉಗ್ರ ಹತನಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಅಂತೆಯೇ ಗಾಯಾಳು ಸಿಬ್ಬಂದಿಗಳಿಗೆ ಸೈನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.