ಅಣೆಕಟ್ಟಿನಲ್ಲಿರುವ ಇಲಿ ಬಿಲಗಳನ್ನು ಪತ್ತೆ ಹಚ್ಚಿ 72 ಗಂಟೆಗಳೊಳಗೆ ಅದನ್ನು ಮುಚ್ಚುವ ಕೆಲಸಗಳನ್ನು ಮಾಡಿದ್ದೇವೆ. ಹೀಗೆ ಮಾಡಿದ್ದರಿಂದ ಕೆಲವೊಂದು ಪ್ರದೇಶಗಳನ್ನು ಪ್ರವಾಹದಿಂದ ರಕ್ಷಿಸುವ ಯತ್ನ ಮಾಡಿದ್ದೇವೆ ಎಂದು ರಂಜನ್ ಅವರು ತಿಳಿಸಿದ್ದಾರೆ. ಇನ್ನು ರಂಜನ್ ಅವರ ಸಿದ್ಧಾಂತವನ್ನು ಬೆಂಬಲಿಸಿದ ಸಣ್ಣ ನೀರಾವರಿ ಸಚಿವ ದಿನೇಶ್ ಚಂದ್ರ ಯಾದವ್ ಅವರು, ಅಣೆಕಟ್ಟುಗಳು ದುರ್ಬಲಗೊಳ್ಳಲು ಇಲಿಗಳು ಪ್ರಮುಖ ಕಾರಣ ಎಂದಿದ್ದಾರೆ.