ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರ ದಾಳಿ ಆತಂಕದ ನಡುವೆಯೇ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸುತ್ತಿದ್ದು, ಸೇನಾಪಡೆಗಳ ರಕ್ಷಣೆ ನಡುವೆ ಶ್ರೀನಗರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಂತೆಯೇ ಇತ್ತ ಪ್ರವಾಹ ಪೀಡಿತ ಬಿಹಾರ, ಉತ್ತರಾಖಂಡ, ಉತ್ತರ ಪ್ರದೇಶದಲ್ಲೂ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸುತ್ತಿದ್ದು, ಮಧ್ಯ ಪ್ರದೇಶದ ಭೋಪಾಲ್ ನ ಈದ್ಘಾ ಮೈದಾನದಲ್ಲಿ ಸಾವಿರಾರು ಮಕ್ಕಳು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದ್ದಾರೆ.