ದೇಶದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದ್ದು, ಅದರ ಅನ್ವಯ ಹಸು, ಎಮ್ಮೆ, ಒಂಟೆ ಹಾಗೂ ಗೂಳಿಗಳನ್ನು ಕೊಲ್ಲುವಂತಿಲ್ಲ. ಒಂದು ವೇಳೆ ನಿಯಮ ಮೀರಿ ಪ್ರಾಣಿಗಳ ವಧೆಗೆ ಮುಂದಾದರೆ ಅಂತಹವರ ವಿರುದ್ಧ ಗೂಂಡಾ ಕಾಯ್ದೆಯಡಿಯ ಕ್ರಮ ಜರುಗಿಸಲಾಗತ್ತದೆ ಎಂದು ಉತ್ತರ ಪ್ರದೇಶದ ಸಂಬಾಲ್ ಜಿಲ್ಲಾಧಿಕಾರಿ ರಷೀದ್ ಖಾನ್ ಕಠಿಣ ಎಚ್ಚರಿಕೆ ನೀಡಿದ್ದಾರೆ. ಅಂತೆಯೇ ಒಂದು ವೇಳೆ ಇಂತಹ ಕೃತ್ಯಗಳು ಬೆಳಕಿಗೆ ಬಂದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜುರುಗಿಸಿ ಅವರ ಸ್ಥಿರಾಸ್ತಿ ಮತ್ತು ಚರಾಸ್ತಿಗಳನ್ನು ಜಿಲ್ಲಾಡಳಿತ ಮುಟ್ಟುಗೋಲು ಹಾಕಿಕೊಳ್ಳುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.