ಇನ್ನು ಈ ಬಗ್ಗೆ ಮಾತನಾಡಿರುವ ಆತ್ಮಹತ್ಯೆ ತಡೆ ಕೇಂದ್ರ ಸಂಸ್ಥೆಯ ಸ್ಥಾಪಕಿ ಹಾಗೂ ವೈದ್ಯೆ ಲಕ್ಷ್ಮೀ ವಿಜಯ ಕುಮಾರ್ ಅವರು, ದೇಶಾದ್ಯಂತ ಬ್ಲೂ ವೇಲ್ ಗೇಮ್ ನೊಳಗೆ ಪ್ರವೇಶ ಮಾಡಿರುವ ಮಕ್ಕಳು ಇದೀಗ ಆ ಗೇಮ್ ನಿಂದ ಹೊರಗೆ ಬರುವ ದಾರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಹೆಚ್ಚಿನವರು ಬ್ಲೂವೇಲ್ ಚಾಲೆಂಜ್ನಿಂದ ಹೊರಬರಲು ಹೆದರುತ್ತಿದ್ದಾರೆ. ಯಾಕೆಂದರೆ ಆಟಗಾರರು ಹಾಗೂ ಅವರ ಕುಟುಂಬವನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಒಡ್ಡಲಾಗುತ್ತಿದೆ. ಬ್ಲೂವೇಲ್ ಚಾಲೆಂಜ್ನ ಗೀಳು ಅಂಟಿಸಿಕೊಂಡ ಮಕ್ಕಳಲ್ಲಿ ಮೂರು ದಿನಗಳಲ್ಲಿ ಕನಿಷ್ಠ ಒಂದು ಮಗು ತಪ್ಪೊಪ್ಪಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.