ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಬಡ್ತಿ ಪಡೆದ ಸಚಿವರು!

ರಾಜ್ಯ ಸಚಿವ ಸ್ಥಾನದಿಂದ ಕ್ಯಾಬಿನೆಟ್ ದರ್ಜೆಗೆ ಬಡ್ತಿ ಪಡೆದ ನಾಲ್ವರು ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಿರೀಕ್ಷೆಗೆ ತಕ್ಕಂತೆ ಉತ್ತಮ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ನೂತನ ಕೇಂದ್ರ ಸಚಿವರು
ಸುದ್ದಿಗಾರರೊಂದಿಗೆ ನೂತನ ಕೇಂದ್ರ ಸಚಿವರು
Updated on
ನವದೆಹಲಿ: ರಾಜ್ಯ ಸಚಿವ ಸ್ಥಾನದಿಂದ ಕ್ಯಾಬಿನೆಟ್ ದರ್ಜೆಗೆ ಬಡ್ತಿ ಪಡೆದ ನಾಲ್ವರು ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಿರೀಕ್ಷೆಗೆ ತಕ್ಕಂತೆ ಉತ್ತಮ ಕೆಲಸ  ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಪ್ರಮಾಣ ವಚನ ಸ್ವೀಕಾರದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ  ಮಾಡಬೇಕಿರುವುದು ನಮ್ಮ ಕರ್ತವ್ಯ. ನಮಗೆ ನೀಡಿರುವ ಹೊಸ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇವೆ ಎಂದು ಹೇಳಿದ್ದಾರೆ.
ಅಂತೆಯೇ ಮತ್ತೋರ್ವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಾತನಾಡಿ, ಮೊದಲು ನಮ್ಮ ಮೇಲೆ ಭರವಸೆ ಇಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ. ಎಲ್ಲರೂ ಒಗ್ಗೂಡಿ ಕೆಲಸ ಮಾಡುವ  ಮೂಲಕ 2022ರ ವೇಳೆಗೆ ಭಾರತವನ್ನು ವಿಶ್ವದ ಅಗ್ರ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.
ಏತನ್ಮಧ್ಯೆ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸತ್ಯಪಾಲ್ ಸಿಂಗ್ ಅವರ ದೆಹಲಿ ನಿವಾಸದಲ್ಲಿ ಸಂಭ್ರಮಾಚರಣೆ ಮನೆ ಮಾಡಿದ್ದು, ಸಂಬಂಧಿಕರು ಸಿಹಿ ಹಂಚಿ ಸಂಭ್ರಮಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com