ಭಾನುವಾರ ಮುಖ್ಯಮಂತ್ರಿ ತೀರ್ಥ ದರ್ಶನ ಯೋಜನೆ-2017ರ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜ್ ಸಿಂಗ್ ಚೌಹ್ವಾಣ್ ಅವರು, ಪೋಷಕರನ್ನು ಬೀದಿಗೆ ಬಿಡುವ ಅಥವಾ ವೃದ್ಧಾಶ್ರಮಕ್ಕೆ ಬಿಡುವ ಅಮಾನವೀಯ ಸಂಸ್ಕೃತಿ ನಮ್ಮದಲ್ಲ. ಬದಲಿಗೆ ನಮ್ಮನ್ನು ಸಾಕಿ ಸಲಹಿದ ಪೋಷಕರಿಗೆ ಅವರ ಸಂಧ್ಯಾಕಾಲದಲ್ಲಿ ಸೇವೆ ಮಾಡುವುದು ನಮ್ಮ ಸಂಸ್ಕೃತಿ ಎಂದು ಹೇಳಿದರು. ಅಂತೆಯೇ ಪೋಷಕರನ್ನು ವೃದ್ಧಾಶ್ರಮಕ್ಕೆ ಕಳುಹಿಸುವ ಮಕ್ಕಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ತಮ್ಮ ಸರ್ಕಾರ ಕಾನೂನು ಜಾರಿಗೆ ಮುಂದಾಗಿದೆ ಎಂದು ಅವರು ತಿಳಿಸಿದರು.