ಕೇಂದ್ರ ಸಂಪುಟ ಪುನರ್‌ರಚನೆ: ನಿತೀಶ್ ಕುಮಾರ್ ಅಸಮಾಧಾನಕ್ಕೆ ಲಾಲೂ ಗೇಲಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್‌ರಚನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ. ಇದಕ್ಕೆ ಆರ್ಜೆಡಿ...
ಲಾಲೂ ಪ್ರಸಾದ್ ಯಾದವ್, ನಿತೀಸ್ ಕುಮಾರ್
ಲಾಲೂ ಪ್ರಸಾದ್ ಯಾದವ್, ನಿತೀಸ್ ಕುಮಾರ್
Updated on
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್‌ರಚನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನಗೊಂಡಿದ್ದಾರೆ. ಇದಕ್ಕೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಗೇಲಿ ಮಾಡಿದ್ದಾರೆ. 
ಇತೀಚೆಗಷ್ಟೇ ನಿತೀಶ್ ಕುಮಾರ್ ಅವರು ಮಹಾಘಟಬಂಧನ ತೊರೆದು ಎನ್ಡಿಎಗೆ ಮರಳಿದ್ದರು. ಇಂದು ನಡೆದ ಪುನರ್ರಚನೆಗೆ ತಮಗೆ ಆಹ್ವಾನ ನೀಡಿಲ್ಲವೆಂದು ಅಸಮಾಧಾನಗೊಂಡಿದ್ದರೆ. ಇದಕ್ಕೆ ಲಾಲು ಪ್ರಸಾದ್ ಯಾದವ್ ಅವರು ಮರದಿಂದ ಜಿಗಿಯುವ ಕೋತಿಯನ್ನು ಮತ್ತೆ ಸೇರಿಸಿಕೊಳ್ಳಲಾಗಲ್ಲ ಎಂದು ಗೇಲಿ ಮಾಡಿದ್ದಾರೆ. 
ಜೆಡಿಯುಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಿದ್ದರೆ ಬಿಹಾರದ ಅಭಿವೃದ್ಧಿಗೆ ಹೆಚ್ಚಿನ ಸಹಕಾರಿಯಾಗುತ್ತಿತ್ತು. ಇನ್ನು ಮುಂದಿನ ದಿನಗಳಲ್ಲಿ ಸಂಪುಟ ಪುನರ್ರಚನೆಯಾಗುವ ಸಂಭವವಿದೆ. ಅದರಲ್ಲಿ ಜೆಡಿಯುಗೆ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಜೆಡಿಯು ಸಂಸದ ಕುಶಲೇಂದ್ರ ಕುಮಾರ್ ಪ್ರತಿಕ್ರಿಯಿಸಿದ್ದಾರೆ. 
ನೂತನ ಸಚಿವರಿಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com