ಭಾನುವಾರ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಿಗದಿಯಾಗಿದ್ದರೂ, ರಕ್ಷಣಾ ಖಾತೆಯನ್ನು ಯಾರಿಗೆ ವಹಿಸಬೇಕು ಎಂಬ ಗೊಂದಲ ಶನಿವಾರ ರಾತ್ರಿಯವರೆಗೆ ಮುಂದುವರಿದಿತ್ತು. ಪುನರ್ ರಚನೆ ವೇಳೆ ಹಿರಿಯ ಸಚಿವರೊಬ್ಬರಿಗೆ ವಹಿಸುವ ನಿಟ್ಟಿನಲ್ಲಿ ವರಿಷ್ಠರು ಶನಿವಾರ ರಾತ್ರಿವರೆಗೆ ಮೂರು ಸುತ್ತಿನ ಮಾತುಕತೆ ನಡೆಸಿದರು. ಹಿರಿಯ ಸಚಿವರಾದ ರಾಜನಾಥ ಸಿಂಗ್, ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ಅರುಣ್ ಜೇಟ್ಲಿ ನೇತೃತ್ವದಲ್ಲಿ ಸಭೆ ನಡೆಯಿತು. ಆದರೆ, ರಕ್ಷಣಾ ಖಾತೆಯ ಬಗ್ಗೆ ಅನೇಕರು ನಿರಾಸಕ್ತಿ ತಾಳುತ್ತಿರುವುದರಿಂದ ಗೊಂದಲ ಮುಂದುವರಿದಿದೆ ಎಂದು ಹೇಳಲಾಗಿದೆ.