ದಿನ ಕಳೆದಂತೆ ಉತ್ತರಪ್ರದೇಶದಲ್ಲಿ ಪರಿಸ್ಥಿತಿ ದುಸ್ಥರವಾಗುತ್ತಿದೆ. ಇನ್ನು ಗೋರಕ್ ಪುರದ ಬಿಆರ್ಡಿ ಆಸ್ಪತ್ರೆಯಲ್ಲಿ ನಡೆದಿದ್ದ ದುರಂತವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕವರ್ ಮಾಡಿಕೊಂಡಿದ್ದರು. ಇದೀಗ ಫರೂಕಾಬಾದ್ ನಲ್ಲಿ ಇದೇ ರೀತಿಯ ದುರಂತ ಸಂಭವಿಸಿದ್ದು ಪರಿಸ್ಥಿತಿಯನ್ನು ಸುಧಾರಿಸಲು ಯೋಗಿ ಅವರ ಕೈಯಲ್ಲಿ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು ಎಂದರು.