ಗಣೇಶ ಮೂರ್ತಿ ವಿಸರ್ಜನೆ ಹಿನ್ನಲೆಯಲ್ಲಿ ನಗರದ ವಿವಿಧೆಡೆ ಭಾರೀ ಸಿದ್ಥತೆಗಳನ್ನು ನಡೆಸಲಾಗಿದ್ದು, ಇದಕ್ಕಾಗಿ ಈಗಾಗಲೇ ಮುಂಬೈ ನಗರದೆಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭದ್ರತೆಗೆ ಯಾವುದೇ ರೀತಿಯ ಧಕ್ಕೆಯುಂಟಾಗದಂತೆ 40 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, 5,000 ಸಿಸಿವಿಟಿ ಹಾಗೂ ಡ್ರೋನ್ ಗಳನ್ನು ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.