ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಾಬಾ ರಾಮ್ ರಹೀಮ್ ಗುರ್ಮೀತ್ ಸಿಂಗ್ ರ ಸಿರ್ಸಾದಲ್ಲಿರುವ ಡೇರಾ ಸಚ್ಚಾ ಸೌದಾದ ಆಶ್ರಮವನ್ನು ಶೋಧಿಸಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ. ಅಲ್ಲದೇ ನಿವೃತ್ತ ನ್ಯಾಯಾಧೀಶ ಕೆಎಸ್ ಪವಾರ್ ಅವರನ್ನು ಕೋರ್ಟ್ ಕಮಿಷನರ್ ಆಗಿ ನೇಮಕ ಮಾಡಿ, ಅವರ ಮೇಲ್ವಿಚಾರಣೆಯಲ್ಲಿ ಶೋಧ ಕಾರ್ಯ ನಡೆಸುವಂತೆ ಸೂಚನೆ ನೀಡಿದೆ.