ನಿನ್ನೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ನಲ್ಲಿರುವ ತಮ್ಮ ನಿವಾಸದಲ್ಲೇ ಪತ್ರಕರ್ತೆ ಗೌರಿ ಲಂಕೇಳ್ ಅವರು ಹತ್ಯೆಗೀಡಾಗಿದ್ದು, ಈ ಸಂಬಂಧ ಕೇಂದ್ರ ಗೃಹ ಇಲಾಖೆ ರಾಜ್ಯ ಗೃಹ ಕಾರ್ಯದರ್ಶಿಗಳಿಂದ ಮಾಹಿತಿ ಕೇಳಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ರಾಜ್ಯ ಗೃಹ ಕಾರ್ಯದರ್ಶಿಗಳಿಗೆ ಪತ್ರಬರೆದಿದ್ದು, ಹತ್ಯೆ ಸಂಬಂಧ ವರದಿ ನೀಡುವಂತೆ ಕೇಳಿದ್ದಾರೆ.