ಮುಂಬೈ: ಗಣೇಶ ವಿಸರ್ಜನೆ ದುರಂತದಲ್ಲಿ 15 ಮಂದಿ ಸಾವು

ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಅವಘಡಗಳಲ್ಲಿ ಮಹಾರಾಷ್ಟ್ರದಾದ್ಯಂತ ಕರ್ತವ್ಯನಿರತ ಪೊಲೀಸ್ ಸೇರಿದಂತೆ ಒಟ್ಟು 15 ಮಂದಿ ಸಾವನ್ನಪ್ಪಿದ್ದಾರೆಂದು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮುಂಬೈ: ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಅವಘಡಗಳಲ್ಲಿ ಮಹಾರಾಷ್ಟ್ರದಾದ್ಯಂತ ಕರ್ತವ್ಯನಿರತ ಪೊಲೀಸ್ ಸೇರಿದಂತೆ ಒಟ್ಟು 15 ಮಂದಿ ಸಾವನ್ನಪ್ಪಿದ್ದಾರೆಂದು ಬುಧವಾರ ತಿಳಿದುಬಂದಿದೆ. 
ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಮನೆಯಲ್ಲಿ ಪ್ರತಿಷ್ಠಾಪಿಸಿದ್ದ ಸಾವಿರಾರು ಗಣೇಶ ಮೂರ್ತಿಗಳನ್ನು ನಿನ್ನೆ ವಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಸಂಭವಿಸಿರುವ ದುರಂತಗಳಲ್ಲಿ ಅಪ್ರಾಪ್ತ ಮಕ್ಕಳು ಹಾಗೂ ಕರ್ತವ್ಯನಿರತ ಪೊಲೀಸರು ಸೇರಿದಂತೆ ಒಟ್ಟು 15ಮಂದಿ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. 
ಇಂದ್ರಯಾನಿ ನದಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುತ್ತಿದ್ದ ವೇಳೆ ನಾಲ್ಕು ಮಂದಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರೆ, ಔರಂಗಾಬಾದ್ ನಲ್ಲಿ ಸಂಭವಿಸಿದ ಅವಘಡಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಜಲ್'ಗಾಂವ್ ನಲ್ಲಿ ಇಬ್ಬರು, ನಾಶಿಕ್ ಹಾಗೂ ಬೀಡ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 
ಪರೇಲ್ ನ ಲಾಲ್'ಬಾಗ್ ನಲ್ಲಿ ಗಣೇಶನ ಉತ್ಸವದ ವೇಳೆ ಕರ್ತವ್ಯ ನಿರತರಾಗಿದ್ದ ಸಹಾಯಕ ಸಬ್ ಇನ್ಸ್'ಪೆಕ್ಟರ್ ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದಾರೆ. ಇದಲ್ಲದೆ, ಪುಣೆಯ ಇಂದ್ರಯಾನಿ ನದಿಯಲ್ಲಿ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಅಧಿಕಾರಿಗಳು ತೀವ್ರ ಹುಡುಕಾಟ ಆರಂಭಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com