ಪ್ರಜಾಪ್ರಭುತ್ವಕ್ಕೆ ಅತ್ಯಂತ ದುಃಖದ ದಿನ: ಪಿಸಿಐ ಅಧ್ಯಕ್ಷ ಗೌತಮ್ ಲಹಿರಿ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾದ...
ಪ್ರೆಸ್ ಕ್ಲಬ್ ಆಫ್ ಇಂಡಿಯಾ ಅಧ್ಯಕ್ಷ ಗೌತಮ್ ಲಹಿರಿ
ಪ್ರೆಸ್ ಕ್ಲಬ್ ಆಫ್ ಇಂಡಿಯಾ ಅಧ್ಯಕ್ಷ ಗೌತಮ್ ಲಹಿರಿ
Updated on
ನವದೆಹಲಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಅಧ್ಯಕ್ಷ ಗೌತಮ್ ಲಹಿರಿ, ಪ್ರಜಾಪ್ರಭುತ್ವದಲ್ಲಿ ಇದೊಂದು ದುಃಖದ ದಿನ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಅಧ್ಯಕ್ಷರಾಗಿ, ಈ ಹತ್ಯೆ ದೇಶದ ಪ್ರಜಾಪ್ರಭುತ್ವ ಮತ್ತು ಪತ್ರಿಕಾ ಸ್ವಾತಂತ್ರ್ಯಕ್ಕೆ ಅತ್ಯಂತ ದುಃಖದ ದಿನ ಎಂದು ಭಾವಿಸುತ್ತೇನೆ. ದೇಶದಲ್ಲಿನ ತಪ್ಪುಗಳನ್ನು ಬಹಿರಂಗಪಡಿಸುತ್ತಿದ್ದ ಪತ್ರಕರ್ತೆಯ ಹತ್ಯೆಯಾಗಿದೆ. ಪತ್ರಕರ್ತನಾಗಿ ಈ ಘಟನೆಯನ್ನು ಸ್ವೀಕರಿಸಲು ಕಷ್ಟವಾಗುತ್ತಿದೆ ಎಂದರು.
ಗೌರಿ ಲಂಕೇಶ್ ಹತ್ಯೆಯನ್ನು ದೇಶದ ಎಲ್ಲಾ ಪತ್ರಕರ್ತರು ಖಂಡಿಸಲು ಮುಂದೆ ಬರಬೇಕು. ಹತ್ಯೆ ಮಾಡಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲು ಒತ್ತಾಯಿಸಬೇಕೆಂದು ಅವರು ಹೇಳಿದರು.
ಈ ಹತ್ಯೆ ಹೇಗೆ ನಡೆಯಿತು ಎಂಬುದನ್ನು ಸರ್ಕಾರ ವಿವರಿಸಬೇಕು ಮತ್ತು ಅಪರಾಧಿಗಳನ್ನು ಗುರುತಿಸಿ ಶೀಘ್ರವೇ ಶಿಕ್ಷೆ ನೀಡಬೇಕೆಂದು ಗೌತಮ್ ಲಹಿರಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com