ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಅಧ್ಯಕ್ಷರಾಗಿ, ಈ ಹತ್ಯೆ ದೇಶದ ಪ್ರಜಾಪ್ರಭುತ್ವ ಮತ್ತು ಪತ್ರಿಕಾ ಸ್ವಾತಂತ್ರ್ಯಕ್ಕೆ ಅತ್ಯಂತ ದುಃಖದ ದಿನ ಎಂದು ಭಾವಿಸುತ್ತೇನೆ. ದೇಶದಲ್ಲಿನ ತಪ್ಪುಗಳನ್ನು ಬಹಿರಂಗಪಡಿಸುತ್ತಿದ್ದ ಪತ್ರಕರ್ತೆಯ ಹತ್ಯೆಯಾಗಿದೆ. ಪತ್ರಕರ್ತನಾಗಿ ಈ ಘಟನೆಯನ್ನು ಸ್ವೀಕರಿಸಲು ಕಷ್ಟವಾಗುತ್ತಿದೆ ಎಂದರು.