ಇದೇ ವೇಳೆ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿರುವ ಅವರು, ತಾನೊಬ್ಬ ದೊಡ್ಡ ನಾಯಕನೆಂದು ಹೇಳಿಕೊಂಡು ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಆರ್'ಎಸ್ಎಸ್'ನ್ನು ದೂಷಿಸುತ್ತಿರುವ ರಾಹುಲ್ ಅವರು ತನಿಖೆ ಪೂರ್ಣಗೊಳ್ಳುವುದಕ್ಕೂ ಮುನ್ನವೇ ಪ್ರಕರಣದಲ್ಲಿ ಆರ್'ಎಸ್ಎಸ್ ಹಾಗೂ ಬಲಪಂಥೀಯರು ಭಾಗಿಯಾಗಿದ್ದಾರೆಂದು ಆರೋಪಿಸುತ್ತಿದ್ದಾರೆ. ಪ್ರಕರಣದಲ್ಲಿ ರಾಹುಲ್ ಅವರೇ ತೀರ್ಪನ್ನು ನೀಡಿದ್ದಾರಾದರೆ, ಪ್ರಕರಣದಲ್ಲಿ ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ನ್ಯಾಯ ಸಮ್ಮತವಾಗಿ ತನಿಖೆ ನಡೆಸುತ್ತದೆ ಎಂದು ನಂಬಬಹುದೇ?...