ರಾಜನಾಥ್ ಸಿಂಗ್ ಭೇಟಿ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಓಮರ್ ಅಬ್ದುಲ್ಲಾ, ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆಯಂದು ಹೇಳಿದ್ದ ಮಾತುಗಳನ್ನು ನೆನಪಿಸಿದ್ದಾರೆ. "ಗುಂಡಿನಿಂದ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವುದು ಅಸಾಧ್ಯ" ಎಂದು ಮೋದಿ ಹೇಳಿದ್ದರು. ಈಗ ಇದೇ ಮಾತುಗಳನ್ನು ನೆನಪಿಸಿರುವ ಓಮರ್ ಅಬ್ದುಲ್ಲಾ, ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದ ಮಾತು ಕೃತಿಯಲ್ಲಿ ಜಾರಿಯಾಗಬೇಕೆಂದು ಬಯಸುತ್ತಿದ್ದೇವೆ ಎಂದು ಹೇಳಿದ್ದಾರೆ.