ರಿಯಾನ್ ಶಾಲೆ ಘಟನೆ ಶಿಕ್ಷಕರಿಗೆ ಎಚ್ಚರಿಕೆ ಗಂಟೆ: ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್

ಹರ್ಯಾಣದ ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್ ಪ್ರತಿಕ್ರಿಯೆ ನೀಡಿದ್ದು, ಶಿಕ್ಷಕರು ಹೆಚ್ಚು ಜಾಗರೂಕರಾಗಿ ಗಮನ ಹರಿಸಬೇಕೆಂಬುದಕ್ಕೆ ಈ ಪ್ರಕರಣ ಎಚ್ಚರಿಕೆ ಗಂಟೆಯಾಗಿದೆ ಎಂದು ಹೇಳಿದ್ದಾರೆ.
ಪ್ರಕಾಶ್ ಜಾವ್ಡೇಕರ್
ಪ್ರಕಾಶ್ ಜಾವ್ಡೇಕರ್
Updated on
ಪುಣೆ: ಹರ್ಯಾಣದ ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್ ಪ್ರತಿಕ್ರಿಯೆ ನೀಡಿದ್ದು, ಶಿಕ್ಷಕರು ಹೆಚ್ಚು  ಜಾಗರೂಕರಾಗಿ ಗಮನ ಹರಿಸಬೇಕೆಂಬುದಕ್ಕೆ ಈ ಪ್ರಕರಣ ಎಚ್ಚರಿಕೆ ಗಂಟೆಯಾಗಿದೆ ಎಂದು ಹೇಳಿದ್ದಾರೆ. 
ಇಂತಹ ಘಟನೆಗಳು ಮರುಕಳಿಸದಂತೆ ಶಿಕ್ಷಕರು ಹೆಚ್ಚು ಎಚ್ಚರಿಕೆ ವಹಿಸಬೇಕಾಗಿದೆ. ಶಿಕ್ಷಕರಿಗೆ ಇದು ಎಚ್ಚರಿಕೆಯೂ ಹೌದು ಎಂದಿರುವ ಪ್ರಕಾಶ್ ಜಾವ್ಡೇಕರ್, ಪೊಲೀಸರು ಪ್ರಕರಣದ ಆರೋಪಿಯನ್ನು ತಲುಪಿದ್ದು, ಶೀಘ್ರವೇ ನ್ಯಾಯ ಸಿಗುವ ಭರವಸೆ ಇದೆ ಎಂದು ಹೇಳಿದ್ದಾರೆ. 
ಇದೇ ವೇಳೆ ಸಿಬಿಎಸ್ ಸಿ ಮಂಡಳಿ ತನ್ನ ಮೇಲ್ವಿಚಾರಣೆಯ ಶಾಲೆಗಳ ಮೇಲೆ ಕಣ್ಣಿಡಬೇಕು ಎಂದು ಪ್ರಕಾಶ್ ಜಾವ್ಡೇಕರ್ ಹೇಳಿದ್ದು, ಘಟನೆ ಬಗ್ಗೆ ವರದಿ ನೀಡುವಂತೆ ಕೇಳಲಾಗಿದ್ದು, ವರದಿ ಬಂದ ನಂತರ ತಮ್ಮ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಪ್ರಕಾಶ್ ಜಾಅವ್ಡೇಕರ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com