ಬಾರ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನು ಸನ್ಮಾನಿಸಿ ಮಾತನಾಡಿದ ರಾಮ್ ಜೇಠ್ಮಲಾನಿ "ನಾನು ನನ್ನ ವೃತ್ತಿಯಿಂದ ಮಾತ್ರವೇ ನಿವೃತ್ತನಾಗುತ್ತಿದ್ದೇನೆ. ನಾನು ಜೀವಂತ ಇರುವ ತನಕ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಯಲಿದೆ. ಭಾರತ ಉತ್ತಮ ಸ್ಥಿತಿ ಹೊಂದಲು ಶ್ರಮಿಸುತ್ತೇನೆ" ಎಂದರು.