ರಿಯಾನ್ ಶಾಲೆ 7 ವರ್ಷದ ವಿದ್ಯಾರ್ಥಿ ಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಭಾರತ ಅತ್ಯಂತ ಹಳೆಯ ಹಾಗೂ ಶ್ರೇಷ್ಠ ಸಂಸ್ಕೃತಿಯನ್ನು ಹೊಂದಿರುವ ದೇಶವಾಗಿದೆ. ವಿಶ್ವದಲ್ಲಿಯೇ ನಾವು ಅತ್ಯಂತ ದೊಡ್ಡ ಪ್ರಜಾಪ್ರಭುತ್ವನ್ನು ಹೊಂದಿದ್ದೇವೆ. ಆದರೆ, ದೇಶದಲ್ಲಿರುವ ಮಕ್ಕಳು ಅಪಾಯದಲ್ಲಿದ್ದರೆ, ಭಾರತ ಕೂಡ ಅಪಾಯದಲ್ಲಿದೆ ಎಂದರ್ಥ. ಮಕ್ಕಳು ಸುರಕ್ಷಿತವಾಗಿಲ್ಲ ಎಂದರೆ ದೇಶ ಕೂಡ ಸುರಕ್ಷಿತವಾಗಿರುವುದಿಲ್ಲ ಎಂದು ಹೇಳಿದ್ದಾರೆ.