ಇನ್ನು ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಲಹೆಗಾರ ಅಜಿತ್ ಧೋವಲ್, ಅರುಣಾಚಲ ಪ್ರದೇಶ ಸಿಎಂ ಪೇಮಾ ಖಂಡು, ಗೃಹಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಬಹುತೇಕ ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರು ಕಳೆದ 5 ದಶಕಗಳಿಂದ ಅರುಣಾಚಲ ಪ್ರದೇಶದಲ್ಲಿ ವಾಸಿಸುತ್ತಿದ್ದು, ಸರ್ಕಾರದ ಯೋಜನೆಗಳನ್ನು ಅನುಭವಿಸುವಲ್ಲಿ ವಿಫಲರಾಗಿದ್ದಾರೆ. ಇದೇ ಕಾರಣಕ್ಕೆ ಈ ಹಿಂದೆ ಸುಪ್ರೀಂ ಕೋರ್ಟ್ ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರಿಗೆ ಪೌರತ್ವ ನೀಡುವಂತೆ ಆದೇಶ ನೀಡಿತ್ತು.