ಡೇರಾ ಸಚ್ಚಾ ಸೌದ ಐಟಿ ಮುಖ್ಯಸ್ಥನ ಬಂಧನ, ಹನಿಪ್ರೀತ್ ಗಾಗಿ ತೀವ್ರ ಶೋಧ

ಇಬ್ಬರು ಸಾದ್ವಿಯರ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾಗಿರುವ ಸ್ವಯಂ ಘೋಷಿತ ದೇವಮಾನವ ಡೇರಾ ಸಚ್ಚಾ ಸೌದ ಮುಖ್ಯಸ್ಥ....
ಡೇರಾ ಸಿರ್ಸಾ ಆಶ್ರಮ
ಡೇರಾ ಸಿರ್ಸಾ ಆಶ್ರಮ
ಸಿರ್ಸಾ: ಇಬ್ಬರು ಸಾದ್ವಿಯರ ಮೇಲೆ ಅತ್ಯಾಚಾರ ಎಸಗಿ ಜೈಲು ಪಾಲಾಗಿರುವ ಸ್ವಯಂ ಘೋಷಿತ ದೇವಮಾನವ ಡೇರಾ ಸಚ್ಚಾ ಸೌದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ವಿರುದ್ಧದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಹರಿಯಾಣ ಪೊಲೀಸರು ಬುಧವಾರ ಡೇರಾದ ಐಟಿ ಮುಖ್ಯಸ್ಥನನ್ನು ಬಂಧಿಸಿದ್ದಾರೆ.
ರಾಮ್ ರಹೀಮ್ ಸಿಂಗ್ ಜೈಲು ಪಾಲಾದ ನಂತರ ತಲೆಮರೆಸಿಕೊಂಡಿದ್ದ ಡೇರಾ ಐಟಿ ಮುಖ್ಯಸ್ಥ ವಿನೀತ್ ನನ್ನು ಇಂದು ಸಿರ್ಸಾದಲ್ಲಿ ಹರಿಯಾಣ ಪೊಲೀಸರು ಬಂಧಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಮತ್ತೊಂದು ಕಡೆ ತಲೆಮರೆಸಿಕೊಂಡಿರುವ ರಾಮ್ ರಹೀಮ್ ಸಿಂಗ್ ದತ್ತು ಪುತ್ರಿ ಎನ್ನಲಾಗುತ್ತಿರುವ ಹನಿಪ್ರೀತ್ ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.
ಅತ್ಯಾಚಾರಿ ಬಾಬಾ ರಾಮ್ ರಹೀಮ್ ಸಿಂಗ್ ಕೋರ್ಟ್ ನಿಂದ ತಪ್ಪಿಸಿಕೊಳ್ಳಲು ಸಂಚು ರೂಪಿಸಿದ ಆರೋಪದ ಮೇಲೆ ಹನಿಪ್ರೀತ್ ವಿರುದ್ಧ ರಾಜದ್ರೋಹ ಪ್ರಕರಣ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com