ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲ್'ಭೂಷಣ್ ಜಾಧವ್ ಪ್ರಕರಣ ಕುರಿತಂತೆ ಇಂದು ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ಆಂತರಿಕ ಸಚಿವ ಅಹ್ಸಾನ್ ಇಕ್ಬಾಲ್ ಅವರು, ಭಯೋತ್ಪಾದನೆ ಮೂಲಕ ಭಾರತ ಸಿಪಿಇಸಿಯನ್ನು ನಾಶ ಮಾಡುತ್ತಿದೆ ಎಂಬುದಕ್ಕೆ ಕುಲ್ ಭೂಷಣ್ ಜಾಧವ್ ಪ್ರಕರವೊಂದು ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.