ಸ್ವಚ್ಛತಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ: ಸಚಿವರಿಗೆ ಪ್ರಧಾನಿ ಮೋದಿ

ಕೇಂದ್ರ ಸರ್ಕಾರ ಮಹತ್ವದ ಆಂದೋಲನಾ ಸ್ವಚ್ಛತಾ ಅಭಿಯಾನದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಪುಟ ಸಚಿವರಿಗೆ ಮಂಗಳವಾರ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
ನವದೆಹಲಿ: ಕೇಂದ್ರ ಸರ್ಕಾರ ಮಹತ್ವದ ಆಂದೋಲನಾ ಸ್ವಚ್ಛತಾ ಅಭಿಯಾನದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಪುಟ ಸಚಿವರಿಗೆ ಮಂಗಳವಾರ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 
ನಿನ್ನೆಯಷ್ಟೇ ಸಂಪುಟ ಸಭೆ ಕರೆದಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಮುಖ ವಿಚಾರಗಳ ಬಗ್ಗೆ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಅಕ್ಟೋಬರ್ 2 ರಿಂದ ಸೆಪ್ಟೆಂಬರ್ 5 ವರೆಗೆ ನಡೆಯಲಿರುವ ಸ್ವಚ್ಛಾತಾ ಅಭಿಯಾನದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 
ಇದಲ್ಲದೆ, ಸಾಕ್ಷ್ಯ ಚಿತ್ರವನ್ನೂ ಕೂಡ ಸಚಿವರಿಗೆ ಪ್ರದರ್ಶಿಸಿದ್ದು, ದೇಶದಾದ್ಯಂತ ಸ್ವಚ್ಛತಾ ಅಭಿಯಾನವನ್ನು ಆಯೋಜಿಸುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com