ಭಾರತ ಜಮ್ಮು-ಕಾಶ್ಮೀರದಲ್ಲಿ ನಿರ್ಮಿಸುತ್ತಿರುವ ಕಿಶನ್ ಗಂಗಾ, ರಾಟ್ಲೆ ಜಲವಿದ್ಯುತ್ ಯೋಜನೆಗಳ ಬಗ್ಗೆ ತಗಾದೆ ತೆಗೆದಿರುವ ಪಾಕಿಸ್ತಾನ, ಭಾರತದ ಯೋಜನೆಗಳು 1960 ರ ಸಿಂಧೂ ನದಿ ಒಪ್ಪಂದವನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದೆ. ಆಗಸ್ಟ್ ತಿಂಗಳಲ್ಲಿ ನಡೆದಿದ್ದ ಮಾತುಕತೆಯಲ್ಲಿ ಈ ವಿವಾದದ ಸಂಬಂಧ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದ್ದ ವಿಶ್ವಬ್ಯಾಂಕ್ ಸೆಪ್ಟೆಂಬರ್ 14-`15 ರಂದು ಮತ್ತೊಂದು ಹಂತದ ಮಾತುಕತೆ ನಡೆಯಲಿದೆ ಎಂದು ಹೇಳಿತ್ತು.