ಕಾಶ್ಮೀರ: ಅಮರನಾಥ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್ ಕಮಾಂಡರ್ ಅಬು ಇಸ್ಮಾಯಿಲ್ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ನೌಗಾಮ್ ನಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಅಬು ಇಸ್ಮಾಯಿಲ್ ನನ್ನು ಹತ್ಯೆ ಮಾಡಲಾಗಿದೆ...
ಭದ್ರತಾ ಸಿಬ್ಬಂದಿ
ಭದ್ರತಾ ಸಿಬ್ಬಂದಿ
Updated on
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಾಮ್ ನಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಅಬು ಇಸ್ಮಾಯಿಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಕಳೆದ ಜುಲೈನಲ್ಲಿ ನಡೆದ ಅಮರನಾಥ್ ಯಾತ್ರೆಯ ದಾಳಿಯಲ್ಲಿ ಭಾಗಿಯಾಗಿದ್ದ ಇಸ್ಮಾಯಿಲ್ ಸೇರಿದಂತೆ ಮತ್ತೊಬ್ಬ ಉಗ್ರನನ್ನು ನೌಗಾಮ್ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ಪಾಕಿಸ್ತಾನದ ಪ್ರಜೆಯಾಗಿರುವ ಅಬು ಇಸ್ಮಾಯಿಲ್ ಅಮರನಾಥ್ ಯಾತ್ರೆಯ ಮಾಸ್ಟರ್ ಮೈಂಡ್ ಎನ್ನಲಾಗಿದ್ದು, ಕಳೆದ ಆಗಸ್ಟ್ ನಲ್ಲಿ ಎಲ್ ಇಟಿ ಮುಖ್ಯಸ್ಥ ಅಬು ದುಜಾನ ಹತ್ಯೆಯ ನಂತರ ಎಲ್ ಇಟಿ ಕಮಾಂಡರ್ ಆಗಿ ನೇಮಕಗೊಂಡಿದ್ದ.
ಅಮರನಾಥ್ ಯಾತ್ರಾರ್ಥಿಗಳ ಬಸ್ ಮೇಲೆ ನೆಡದ ದಾಳಿಯಲ್ಲಿ ಎಂಟು ಮಂದಿ ಮೃತಪಟ್ಟಿದ್ದರು. ಅಲ್ಲದೆ 13 ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com