ಭಾರತ ಗಡಿ ಪ್ರವೇಶಿಸಲು ಯತ್ನ: ಇಬ್ಬರು ಉಗ್ರರನ್ನು ಸದೆಬಡಿದ ಸೇನೆ

ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಶ್ರೀನಗರ: ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಉಗ್ರರು ಭಾರತದ ಗಡಿ ನಸುಳಲು ಯತ್ನ ನಡೆಸುತ್ತಿದ್ದರು. ಈ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಲಿಯಾ ಅವರು ಹೇಳಿದ್ದಾರೆ. 
ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆ ಗಸ್ತು ತಿರುಗುತ್ತಿದ್ದು, ಈ ವೇಳೆ ಶಂಕಾಸ್ಪದ ಚಟುವಟಿಕೆಗಳು ಕಂಡು ಬಂದಿತ್ತು. ಈ ವೇಳೆ ಉಗ್ರರು ಹಾಗೂ ಸೇನಾಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದೀಗ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದು. ಹತ್ಯೆಯಾದ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com