ಇನ್ನು ಈ ಬಗ್ಗೆ ಎಎನ್ ಐಗೆ ಪ್ರತಿಕ್ರಿಯಿಸಿರುವ ಸಲ್ಮಾ, ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿಯೊಬ್ಬ ಬಾಟಲ್ ಗೆ ನೀರು ತುಂಬಲು ಹೋಗಿದ್ದ ವೇಳೆ ದುಷ್ಕರ್ಮಿಗಳಿಬ್ಬರು ಟ್ಯಾಂಕ್ ಗೆ ಏನೋ ಬೆರೆಸುತ್ತಿರುವುದನ್ನು ಗಮನಿಸಿದ್ದಾನೆ. ಏನು ಹಾಕುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾಗ ಅವರು ತಮಗೆ ಬೆದರಿಕೆ ಹಾಕಿ, ಬಾಯಿ ಬಿಟ್ಟರೆ ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಕೆ ನೀಡಿ ತಪ್ಪಿಸಿಕೊಂಡಿದ್ದಾರೆ. ಕೂಡಲೇ ವಿದ್ಯಾರ್ಥಿ ವಿಷಯವನ್ನು ವಾರ್ಡನ್ ಗಮನಕ್ಕೆ ತಂದಿದ್ದಾರೆ ಎಂದು ವಿವರಿಸಿದ್ದಾರೆ. ಅಲ್ಲದೆ ಸ್ಥಳದಲ್ಲಿ ಹಲವು ಇಲಿ ಪಾಷಾಣದ ಮಾತ್ರೆಗಳು ಪತ್ತೆಯಾಗಿರುವುದಾಗಿ ಅವರು ತಿಳಿಸಿದ್ದಾರೆ.