ಈ ಹಿಂದೆ ರೊಹಿಂಗ್ಯಾ ಮುಸ್ಲಿಮರ ಗಡಿಪಾರು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗದ ಮುಖ್ಯಸ್ಥ ಝೀದ್ ರಹದ್ ಅಲ್ ಹುಸೇನ್ ಅವರು, ಭಾರತದಲ್ಲಿರುವ ರೊಹಿಂಗ್ಯಾ ಮುಸ್ಲಿಮರನ್ನು ಸಾಮೂಹಿಕ ಬಹಿಷ್ಕಾರ ಹಾಕುವ ಕುರಿತು ಮಾತುಗಳು ಕೇಳಿಬರುತ್ತಿವೆ. ಆದರೆ ಭಾರತವು ಸಾಮೂಹಿಕ ಬಹಿಷ್ಕಾರಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ, ಅಥವಾ ಜನರು ಚಿತ್ರಹಿಂಸೆ ಅಥವಾ ಇತರ ಗಂಭೀರ ಉಲ್ಲಂಘನೆಗಳನ್ನು ಎದುರಿಸುವ ಸ್ಥಳಕ್ಕೆ ಮರಳಲು ಸಾಧ್ಯವಿಲ್ಲ ಎಂದು ಹೇಳಿದ್ದರು.