ನಾರಾಯಣ ರಾಣೆ ಅವರು ಹಲವು ಬಾರಿ ತಾವು ಬಿಜೆಪಿ ಸೇರುವ ಸುಳಿವು ನೀಡಿದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮಹಾರಾಷ್ಟ್ರ ಬಿಜೆಪಿಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಇಲ್ಲ. ಪಕ್ಷದ ಅಧ್ಯಕ್ಷರಾದ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ರಾಣೆಯನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಆದರೆ ರಾಣೆ ಪಕ್ಷಾಂತರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯವಿದೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.