ಬಂಡಾಯ ಕಾಂಗ್ರೆಸ್ ನಾಯಕ ಶಂಕರ್ ಸಿಂಗ್ ವಘೇಲಾರಿಂದ ತೃತೀಯ ರಂಗ ಘೋಷಣೆ

ಗುಜರಾತ್ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಗುಜರಾತ್ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಬಂಡಾಯ....
ಶಂಕರ್ ಸಿಂಗ್ ವಘೇಲಾ
ಶಂಕರ್ ಸಿಂಗ್ ವಘೇಲಾ
Updated on
ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಗುಜರಾತ್ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಬಂಡಾಯ ನಾಯಕ ಶಂಕರ್ ಸಿಂಗ್ ವಘೇಲಾ ಅವರು ತೃತೀಯ ರಂಗ ರಚನೆ ಮಾಡುವುದಾಗಿ ಮಂಗಳವಾರ ಘೋಷಿಸಿದ್ದಾರೆ.
ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಘೇಲಾ, ಗುಜರಾತ್ ನಲ್ಲಿ ಪರ್ಯಾಯ ರಾಜಕೀಯ ಶಕ್ತಿ ಕೆಲಸ ಮಾಡುವುದಿಲ್ಲ ಎಂದು ಹೇಳುವುದು ಒಂದು ಸಾಂಪ್ರದಾ ಮತ್ತು ಕಾಲ್ಪನಿಕ ಅಷ್ಟೆ ಎಂದಿದ್ದಾರೆ.
ಇತ್ತೀಚಿಗಷ್ಟೇ ಕಾಂಗ್ರೆಸ್ ಗೆ ಗುಡ್ ಬೈ ಹೇಳಿರುವ ಶಂಕರ್ ಸಿಂಗ್ ವಘೇಲಾ ಅವರು, ಗುಜರಾತ್ ಜನತೆ ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಬೇಸತ್ತು ಹೋಗಿದ್ದು, ಈಗ ಪರ್ಯಾಯ ಪಕ್ಷದ ನಿರೀಕ್ಷೆಯಲ್ಲಿದ್ದಾರೆ ಎಂದಿದ್ದಾರೆ.
ಆರ್‌ಎಸ್‌ಎಸ್‌ನ ಮಾಜಿ ಕಾರ್ಯಕರ್ತ ವಘೇಲಾ ಅವರು 20 ವರ್ಷಗಳ ಹಿಂದೆ ಬಿಜೆಪಿ ಬಿಟ್ಟು ರಾಷ್ಟ್ರೀಯ ಜನತಾ ಪಕ್ಷ ಸ್ಥಾಪಿಸಿದ್ದರು. ನಂತರ ಆ ಪಕ್ಷವನ್ನು ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com