ಅಖಿಲೇಶ್ ಯಾದವ್ ಖಿನ್ನತೆಯಿಂದ ಬಳಲುತ್ತಿದ್ದಾರೆ: ಯುಪಿ ಡಿಸಿಎಂ ಟೀಕೆ

ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ...
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
ನವದೆಹಲಿ: ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಟೀಕಿಸಿದ್ದಾರೆ.
ಬಿಜೆಪಿಯ ಹಲವು ಮುಖಂಡರು ಅತ್ಯಾಚಾರಿ ಬಾಬಾ ಗುರ್ಮಿತ್ ರಾಮ್ ರಹೀಂ ಸಿಂಗ್ ಅವರ ಜೊತೆ ಸಂಪರ್ಕ ಇಟ್ಟಿ ಕೊಂಡಿದ್ದಾರೆ. ಇದಕ್ಕೆ ಬಿಜೆಪಿ ಮುಖಂಡರು ಡೇರಾ ಮುಖ್ಯಸ್ಥನ ಜೊತೆ ತೆಗೆಸಿಕೊಂಡಿರುವ ಫೋಟೋಗಳು ಸಾಕ್ಷಿಯಾಗಿವೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದರು.
ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಶವ ಪ್ರಸಾದ್ ಮೌರ್ಯ, ಇವುಗಳನ್ನೆಲ್ಲಾ ಬಿಜೆಪಿ ನಂಬುವುದಿಲ್ಲ,  ಯೋಗಿ ಆದಿತ್ಯನಾಥ್ ಸರ್ಕಾರ ರಾಜ್ಯದೆಲ್ಲೆಡೆ ಏಕ ರೂಪದ ಅಭಿವೃದ್ಧಿಗೆ ಗಮನ ಹರಿಸುತ್ತಿದೆ ಎಂದು ಹೇಳಿದ್ದಾರೆ.
ತಮ್ಮ ಸರ್ಕಾರದ ಆರು ತಿಂಗಳ ಅಢಳಿತಾವಧಿಯಲ್ಲಿ ರಾಜ್ಯದಲ್ಲಿ ಎಲ್ಲಿಯೂ ವಿಐಪಿ ಸಂಸ್ಕೃತಿ ಪ್ರದರ್ಶಿಸಿಲ್ಲ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com