ಘಟನೆಯನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಕೋರಿ ಹೈಕೋರ್ಟ್ ಬಾರ್ ಅಸೋಸಿಯೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಿಬಿಐ, ಕೇಂದ್ರ ಸರ್ಕಾರ ಹಾಗೂ ಗೃಹ ಇಲಾಖೆ ನೋಟಿಸ್ ನೀಡಿದ್ದು, ಯಾವ ಕಾರಣಕ್ಕಾಗಿ ಅಥವಾ ಯಾವ ಉದ್ದೇಶಕ್ಕಾಗಿ ಮಧ್ಯರಾತ್ರಿ ಶೋಧ ನಡೆಸಿದ್ದು ಎಂದು ಪ್ರಶ್ನಿಸಿದೆ. ಅಲ್ಲದೆ ವಿಚಾರಣೆಯನ್ನು ಅಕ್ಟೋಬರ್ 16ಕ್ಕೆ ಮುಂದೂಡಿದೆ.