ಅಂಜಲಿ ದಮಲಿಯಾ
ದೇಶ
ಜೀವ ಬೆದರಿಕೆ ಕರೆ: ಕಾರ್ಯಕರ್ತೆ ಅಂಜಲಿ ದಮಲಿಯಾರಿಂದ ಬಿಜೆಪಿ ಶಾಸಕನ ವಿರುದ್ಧ ಎಫ್ ಐಆರ್ ದಾಖಲು
ಭಾರತೀಯ ಜನತಾ ಪಾರ್ಟಿಯ ಶಾಸಕ ಏಕನಾಥ್ ಖಡ್ಸೆ ಮೇಲಿನ ಕೇಸನ್ನು ವಾಪಸ್ ತೆಗೆದುಕೊಳ್ಳುವಂತೆ ತಮಗೆ ಅನಾಮಧೇಯ ಜೀವ ....
ಮುಂಬೈ: ಭಾರತೀಯ ಜನತಾ ಪಾರ್ಟಿಯ ಶಾಸಕ ಏಕನಾಥ್ ಖಡ್ಸೆ ಮೇಲಿನ ಕೇಸನ್ನು ವಾಪಸ್ ತೆಗೆದುಕೊಳ್ಳುವಂತೆ ತಮಗೆ ಅನಾಮಧೇಯ ಜೀವ ಬೆದರಿಕೆ ಕರೆ ಬಂದಿದೆ ಎಂದು ಹೇಳಿ ಕಾರ್ಯಕರ್ತೆ ಅಂಜಲಿ ದಮನಿಯಾ ಎಫ್ಐಆರ್ ದಾಖಲಿಸಿದ್ದಾರೆ.
ಮುಂಬೈನ ವೊಕೊಲಾ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 506, 507ರಡಿಯಲ್ಲಿ ಕೇಸು ದಾಖಲಾಗಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ದಮನಿಯಾ, ಪಾಕಿಸ್ತಾನಿ ಮೂಲದ ಸ್ಥಿರ ದೂರವಾಣಿ ಸಂಖ್ಯೆಯಿಂದ ತಮಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಹೇಳಿದ್ದಾರೆ.ಅಲ್ಲದೆ ಕರೆ ಮಾಡಿದ ವ್ಯಕ್ತಿಯ ಗುರುತಿನ ಸ್ಕ್ರೀನ್ ಶಾಟ್ ತೆಗೆದು ಹಾಕಿದ್ದಾರೆ. ಕರೆಯಲ್ಲಿ ದಾವೂದ್ 2 ಎಂಬ ಹೆಸರು ಬಂದಿದೆ ಎಂದು ಅವರು ಹೇಳಿದ್ದಾರೆ.
ತಮಗೆ ಬಂದ ಅನಾಮಧೇಯ ಬೆದರಿಕೆ ಕರೆ ಬಗ್ಗೆ ಅವರು ಪೊಲೀಸರಿಗೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ತಿಳಿಸಿದ್ದಾರೆ.
ಜಂಟಿ ಪೊಲೀಸ್ ಆಯುಕ್ತ ಘಟನೆಯ ತನಿಖೆ ನಡೆಸುತ್ತಿದ್ದಾರೆ. ಈ ವಿಷಯದಲ್ಲಿ ಕ್ರಮ ತೆಗೆದುಕೊಳ್ಳುವಂತೆ ಅಂಜಲಿ ಪ್ರಧಾನಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೂಡ ಮನವಿ ಮಾಡಿದ್ದಾರೆ.
ಈ ತಿಂಗಳ ಆರಂಭದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಿಂದನಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ಶಾಸಕ ಏಕನಾಥ್ ಖಡ್ಸೆ ವಿರುದ್ಧ ವೊಕಲಾ ಪೊಲೀಸರಿಗೆ ಅಂಜಲಿ ದಮಲಿಯಾ ದೂರು ನೀಡಿದ್ದರು. ಇದರ ನಂತರ ಕಾರ್ಯಕರ್ತೆ ಎಫ್ ಐಆರ್ ದಾಖಲಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ