ಸ್ವಚ್ಚ ಭಾರತ ಅಭಿಯಾನದಡಿ ಮೋದಿಯಿಂದ ವಾರಣಾಸಿಯ ಷಹನ್ ಷಹಾಪುರ್ ನಲ್ಲಿ ಶೌಚಾಲಯಕ್ಕೆ ಶಂಕುಸ್ಥಾಪನೆ

ಉತ್ತರ ಪ್ರದೇಶದ ವಾರಣಾಸಿಯ ಷಹನ್ ಷಹಾಪುರ್ ಗ್ರಾಮದಲ್ಲಿ ಸ್ವಚ್ಚ ಭಾರತ ಅಭಿಯಾನದಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು.
ಶೌಚಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
ಶೌಚಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ
ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯ ಷಹನ್ ಷಹಾಪುರ್ ಗ್ರಾಮದಲ್ಲಿ ಸ್ವಚ್ಚ ಭಾರತ ಅಭಿಯಾನದಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿದರು.
ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯಕ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗ್ರಾಮೀಣಾಭಿವೃದ್ಧಿ ಸಚಿವ ಮಹೇಂದ್ರ ಸಿಂಗ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ನಾಥ್ ಪಾಂಡೆ ಅವರು ಉಪಸ್ಥಿತರಿದ್ದರು.
ಪಶು ಆರೋಗ್ಯ ಮೇಳಕ್ಕೆ ಭೇಟಿ ನೀಡಿದ  ಪ್ರಧಾನ ಮಂತ್ರಿ, ಷಹನ್ ಷಹಾಪುರ್ ಗ್ರಾಮದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ತಮ್ಮ ಎರಡು ದಿನಗಳ ಭೇಟಿಗಾಗಿ ನಿನ್ನೆ ವಾರಣಾಸಿಗೆ ಆಗಮಿಸಿದ್ದರು.
ಪ್ರಧಾನಿ ಇಂದು ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ ಫಲಾನುಭವಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಿದ್ದಾರೆ.
ಪ್ರಧಾನಿ ಮೋದಿ ತಮ್ಮ ನಿನ್ನೆಯ ಕಾರ್ಯಕ್ರಮದಲ್ಲಿ ವಾರಣಾಸಿ ಇಂದ ಗುಜರಾತಿನ ವಡೋದರಾಗೆ ನೇರ ರೈಲು ಸೇವೆಯನ್ನು ಉದ್ಘಾಟಿಸಿದ್ದರು. ದೀನ್ ದಯಾಳ್ ಹಸ್ತಕಾಲಾ ಸಂಕುಲ್ ನ್ನು ಅನಾವರಣಗೊಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com