ಕದನ ವಿರಾಮ ಉಲ್ಲಂಘಿಸಿದ ಪಾಕ್: ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಭಿಂಬೆರ್ ಗಾಲಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿ ವೇಳೆ ಗಸ್ತು ತಿರುಗುತ್ತಿದ್ದ ಇಬ್ಬರು ಯೋಧರಿಗೆ ಗಾಯಗಳಾಗಿವೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಸೇನಾಧಿಕಾರಿಗಳು ಹೇಳಿದ್ದಾರೆ.