ಜಮ್ಮು-ಕಾಶ್ಮೀರ: ಉಗ್ರರ ಅಡಗುತಾಣಗಳ ಮೇಲೆ ದಾಳಿ, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರದ ಹಂದ್ವಾರ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನಾಪಡೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಭಾನುವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಹಂದ್ವಾರ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನಾಪಡೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಭಾನುವಾರ ತಿಳಿದುಬಂದಿದೆ. 
ಗುಪ್ತಚರ ಇಲಾಖೆ ನೀಡಿದ್ದ ಖಚಿತ ಮಾಹಿತಿ ಆಧಾರದ ಮೇಲೆ ಹಂದ್ವಾರದ ಉಗ್ರರ ಅಡಗುತಾಣಗಳ ಮೇಲೆ ಭದ್ರತಾ ಪಡೆಗಳು ದಾಳಿ ನಡೆಸಿತ್ತು. ಈ ವೇಳೆ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು, ಶಸ್ತ್ರಾಸ್ತ್ರಗಳು ಹಾಗೂ ವಿಮಾನ ಹೊಡೆದುರುಳಿಸುವ ಗನ್'ಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ವರದಿಗಳು ತಿಳಿಸಿವೆ. 
ಕದನ ವಿರಾಮ ಉಲ್ಲಂಘಿಸಿದ ಪಾಕ್: ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಭಿಂಬೆರ್ ಗಾಲಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 

ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿ ವೇಳೆ ಗಸ್ತು ತಿರುಗುತ್ತಿದ್ದ ಇಬ್ಬರು ಯೋಧರಿಗೆ ಗಾಯಗಳಾಗಿವೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಸೇನಾಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com