ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಚಾಲನೆ ದೊರೆತ್ತಿದ್ದು, ಪಕ್ಷದ ನಾಯಕರಿಗೆ ಪ್ರಧಾನಿ ಮೋದಿ ಕೆಲವೊಂದು ಮಹತ್ವದ ಸಲಹೆ-ಸೂಚನೆಗಳನ್ನು ನೀಡಿದ್ದಾರೆ. ನೋಟು ಅಮಾನ್ಯೀಕರಣದ ನಂತರ ಆರ್ಥಿಕ ಪ್ರಗತಿ ಕುಂಠಿತವಾಗಿದೆ ಎಂಬ ಅಸಮಾಧಾನ ಭುಗಿಲೆದ್ದಿರುವ ಸಂದರ್ಭದಲ್ಲಿ, ಕೇಂದ್ರ ಸರ್ಕಾರದ ಸದೃಢ ಆರ್ಥಿಕ ನೀತಿಗಳು, ಜಿಎಸ್ಟಿ ಅನುಷ್ಠಾನದ ಫಲಶೃತಿಗಳ ಬಗ್ಗೆ ಮತ್ತಷ್ಟು ಪ್ರಚಾರವನ್ನು ರಾಜ್ಯಗಳಲ್ಲಿ ಕೈಗೊಳ್ಳುವಂತೆ ಮೋದಿ ಪಕ್ಷದ ಮುಖಂಡರು ಮತ್ತು ರಾಷ್ಟ್ರೀಯ ಪದಾಧಿಕಾರಿಗಳು ಸೂಚಿಸಲಿದ್ದಾರೆ ಎನ್ನಲಾಗಿದೆ.