ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಕ್ತಾರ ಮಾತನಾಡಿ, ಕೆಲ ವಿದ್ಯಾರ್ಥಿಗಳು ಬಲವಂತದಿಂದ ಕುಲಪತಿಗಳ ಮನೆ ನುಗ್ಗಲು ಯತ್ನಿಸುತ್ತಿದ್ದರು. ಆದರೆ, ಈ ವೇಳೆ ಸ್ಥಳದಲ್ಲಿದ್ದ ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿಗಳು ಅವರನ್ನು ತಡೆದಿದ್ದರು. ಇದೇ ವೇಳೆ ಹೊರಗಿನಿಂದ ಬಂದಿದ್ದ ಕೆಲ ದುಷ್ಕರ್ಮಿಗಳು ವಿದ್ಯಾರ್ಥಿಗಳ ಮಧ್ಯೆ ಸೇರಿಕೊಂಡು ಕಲ್ಲು ತೂರಾಟ ನಡೆಸಿದ್ದರು. ಇದರ ಪರಿಣಾಮ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು ಎಂದು ತಿಳಿಸಿದ್ದಾರೆ.